ಕಾಸರಗೋಡು: ಮನೆಗೆ ನುಗ್ಗಿ 50 ಪವನ್ ಚಿನ್ನಾಭರಣ ಕಳವು; ಪ್ರಕರಣ ದಾಖಲು

Update: 2023-03-06 13:14 GMT

ಕಾಸರಗೋಡು : ಮನೆಗೆ ನುಗ್ಗಿದ ಕಳ್ಳರು 50 ಪವನ್  ಚಿನ್ನಾಭರಣ  ಕಳವುಗೈದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.

ಪಳ್ಳತ್ತಡ್ಕದಲ್ಲಿ ಅಬ್ದುಲ್ ರಝಾಕ್‌ ಎಂಬವರ ಮನೆಗೆ ನುಗ್ಗಿ ಕೃತ್ಯ ನಡೆಸಲಾಗಿದೆ. ಮನೆಯ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಬ್ದುಲ್ ರಝಾಕ್ ಮತ್ತು ಕುಟುಂಬಸ್ಥರು ಮನೆಗೆ ಬೀಗ ಹಾಕಿ ಎದುರ್ತೋಡುನಲ್ಲಿರುವ‌ ತಮ್ಮ ಪುತ್ರಿಯ ಮನೆಗೆ ತೆರಳಿದ್ದರು. ಸೋಮವಾರ ಬೆಳಗ್ಗೆ ಮನೆಗೆ ಬಂದಾಗ ಮುಂಭಾಗದ ಬಾಗಿಲು ಮುರಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಒಳಗಡೆ ಪರಿಶೀಲಿಸಿದಾಗ ಕಪಾಟಿನಲ್ಲಿರಿಸಿದ್ದ  ಚಿನ್ನಾಭರಣ ನಾಪತ್ತೆಯಾಗಿರುವುದು ಕಂಡು ಬಂದಿದೆ. ಬದಿಯಡ್ಕ  ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ. 

Similar News