ಕಾಂಗ್ರೆಸ್ ಸೇರ್ಪಡೆ ಎನ್ನುವುದು ವದಂತಿ: ಸಚಿವ ವಿ.ಸೋಮಣ್ಣ ಸ್ಪಷ್ಟನೆ

Update: 2023-03-07 06:45 GMT

ಬೆಂಗಳೂರು, ಮಾ6: ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎನ್ನುವುದು ವಂದತಿ. ನಾನು ಎಲ್ಲಿಯೂ ಕಾಂಗ್ರೆಸ್‍ಗೆ ಹೋಗುತ್ತೇನೆ ಎಂದು ಹೇಳಿಕೊಂಡಿಲ್ಲ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದ ಗೋವಿಂದರಾಜನಗರದಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ವದಂತಿಗಳಿಗೆ ನಾನು ಉತ್ತರ ಕೊಡುವುದಿಲ್ಲ. ಸುಖಾಸುಮ್ಮನೆ ಸುಳ್ಳು ಸುದ್ದಿಗಳನ್ನು ಹರಡಬಾರದು ಎಂದರು.

ಸಚಿವ ಆರ್.ಅಶೋಕ್ ಮಾತನಾಡಿ, ಸೋಮಣ್ಣ ಅವರಿಗೆ ಯಾವುದೇ ಅಸಮಾಧಾನವಿಲ್ಲ. ನಾವು ಅವರ ಸಂಪರ್ಕದಲ್ಲಿದ್ದೇವೆ. ಅವರು ಕಾಂಗ್ರೆಸ್‍ಗೆ ಹೋಗುತ್ತಾರೆ ಎಂಬುದಾಗಿ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ನಮ್ಮಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾವೆಲ್ಲ ಒಟ್ಟಾಗಿದ್ದೇವೆ ಎಂದು ತಿಳಿಸಿದರು.

ಯಾತ್ರೆ ಅರ್ಧಕ್ಕೆ ಮೊಟಕು: ವಿಜಯಸಂಕಲ್ಪ ರಥಯಾತ್ರೆಯನ್ನು ನಾಗರಬಾವಿಯಿಂದ ನಾಯಂಡಹಳ್ಳಿಯ ವರೆಗೂ ರಥಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ನಾಯಂಡಹಳ್ಳಿ ವರೆಗೂ ರಥಯಾತ್ರೆಯಲ್ಲಿ ತೆರಳಲು ಸಚಿವ ಅಶೋಕ್ ನಿರಾಕರಿಸಿದ್ದರಿಂದ ರಥಯಾತ್ರೆ ನಾಯಂಡನಹಳ್ಳಿಯ ವರೆಗೂ ಸಾಗದೆ ಅರ್ಧಕ್ಕೆ ಮೊಟಕುಗೊಳಿಸಲಾಯಿತು. ಇದು ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿತು. ಇದರಿಂದ ಕೋಪಗೊಂಡ ಸಚಿವ ವಿ.ಸೋಮಣ್ಣ ನಾಗರಬಾವಿಯಲ್ಲೇ ಯಾತ್ರೆಯನ್ನು ಮೊಟಕುಗೊಳಿಸಿ ರಥಯಾತ್ರೆ ವಾಹನ ಬಿಟ್ಟು ಕಾರಿನಲ್ಲಿ ತೆರಳಿದರು. ಈ ಘಟನೆಯಿಂದ ಇಬ್ಬರ ನಡುವಿನ ತಿಕ್ಕಾಟ ಮುಂದುವರಿದಿದೆ ಎನ್ನುವ ಅನುಮಾನ ಕಂಡುಬಂದಿತು.

Similar News