ಕಾಂಗ್ರೆಸ್ ಸೇರ್ಪಡೆಯಾದ ಇಬ್ಬರು ಮಾಜಿ ಶಾಸಕರು

Update: 2023-03-07 07:30 GMT

ಬೆಂಗಳೂರು, ಮಾ.7: ಕೊಳ್ಳೇಗಾಲ‌ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ಎಸ್‌.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ‌ರಾಗಿದ್ದ ಜಿ.ಎನ್ ನಂಜುಂಡಸ್ವಾಮಿ ಹಾಗೂ ಬಿಜಾಪುರ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ, ಹಾಗೂ ಬಿಜೆಪಿ ಮುಖಂಡ ಮನೋಹರ್ ಐನಾಪುರ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. 

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾದರು. ನಂಜುಂಡಸ್ವಾಮಿ ಅವರಿಗೆ ಕಾಂಗ್ರೆಸ್ ಪಕ್ಷದ ಬಾವುಟ ಕೊಟ್ಟು, ಶಾಲು ಹಾಕಿ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು.

ಇದೇ ವೇಳೆ ಮೈಸೂರು ಮಾಜಿ ಮೇಯರ್ ಪುರುಷೋತ್ತಮ್ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್, ಸಲೀಮ್ ಅಹ್ಮದ್, ಕೆಪಿಸಿಸಿ ಸಂವಹನ ಮತ್ತು ಜಾಲತಾಣ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ, ಮಾಜಿ ಶಾಸಕ ಬಾಲರಾಜ್ ಮತ್ತಿತರರು ಉಪಸ್ಥಿತರಿದ್ದರು.

Similar News