ಅಕ್ರಮವಾಗಿ ಮರದ ದಿಮ್ಮಿ ಸಾಗಾಟ: ಆರೋಪಿ ಬಂಧನ

Update: 2023-03-07 15:31 GMT

ಸುಳ್ಯ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದ ಘಟನೆ ಸೋಮವಾರ ನಡೆದಿದೆ.

ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ  ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಆರೋಪಿ ಮಂಗಳೂರು ಅಸೈಗೋಳಿಯ ಮಹಮ್ಮದ್ ಸಪ್ವಾನ್ ಎಂಬವರನ್ನು ಸಂಪಾಜೆ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮರ ಸಾಗಾಟಕ್ಕೆ ಬಳಸಿದ್ದ ವಾಹನ ಸೇರಿದಂತೆ ಒಟ್ಟು 12 ಹೆಬ್ಬಲಸು ಮರದ ದಿಮ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕಾರ್ಯಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಬಸವರಾಜಪ್ಪ, ವಿನಯಕೃಷ್ಣ ಎಂ.ಸಿ, ಗಸ್ತು ಅರಣ್ಯ ಪಾಲಕರಾದ ನಾಗರಾಜ್ ಎಸ್,ಕಾರ್ತಿಕ್, ವಾಹನ ಚಾಲಕರಾದ ಶಿವಪ್ರಸಾದ್, ಮನೋಜ್ ಮತ್ತಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Similar News