ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-03-10 15:59 GMT

ಕಾರ್ಕಳ: ಆರು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟ ತಾಯಿ ಮತ್ತು ಎಂಟು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ತಮ್ಮನ ವಿಚಾರದಲ್ಲಿ ಮನನೊಂದ ಬಜಗೋಳಿ ಗರಡಿಗುಡ್ಡೆ ನಿವಾಸಿ ರಾಜು ಪೂಜಾರಿ ಎಂಬವರ ಮಗ ಪ್ರದೀಪ (32) ಎಂಬವರು ಮಾ.8ರಂದು ರಾತ್ರಿ ಮನೆಯ ಅಡುಗೆ ಕೋಣೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದ ಮಾಳ ಗ್ರಾಮದ ದರ್ಖಾಸು ಮನೆ ನಿವಾಸಿ ಉಮೇಶ್ ಪೂಜಾರಿ (40) ಎಂಬವರು ಮಾ.9ರಂದು ರಾತ್ರಿ ಮನೆಯ ತೋಟದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News