ಧಾರವಾಡ | ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಬೈಕ್: ತಾಯಿ, ಮಗು ಸ್ಥಳದಲ್ಲೇ ಮೃತ್ಯು

Update: 2023-03-10 18:58 GMT

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಒಂದು ವರ್ಷದ ಹೆಣ್ಣು ಮಗು ಹಾಗೂ ತಾಯಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ವರದಿಯಾಗಿದೆ. 

ಮೃತರನ್ನು ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದ ಸಂಗವ್ವ ಹೆಗ್ಗಣ್ಣವರ (20) ಹಾಗೂ ಆಕೆಯ ಒಂದು ವರ್ಷದ ಹೆಣ್ಣು ಮಗು ಮಾಯಕ್ಕ ಎಂದು ಗುರುತಿಸಲಾಗಿದೆ. 

ಜಕ್ಕಪ್ಪ ಹೆಗ್ಗಣ್ಣವರ ಎಂಬಾತ ತನ್ನ ಪತ್ನಿ ಹಾಗೂ ಮಗಳೊಂದಿಗೆ ಹುಬ್ಬಳ್ಳಿಯತ್ತ ಬೈಕ್ ತೆಗೆದುಕೊಂಡು ಹೊರಟಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ತಡೆಗೋಡೆಗೆ ಬೈಕ್ ಢಿಕ್ಕಿ ಹೊಡೆದಿದೆ. ಇದರಿಂದ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದರೆ ಜಕ್ಕಪ್ಪ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. 

ಘಟನಾ ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಸತ್ತಿಗೌಡರ ಹಾಗೂ ಸಿಬ್ಬಂದಿ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Similar News