ರೈಲು ಢಿಕ್ಕಿ: ಅಪರಿಚಿತ ವ್ಯಕ್ತಿ ಮೃತ್ಯು

Update: 2023-03-11 15:32 GMT

ಬ್ರಹ್ಮಾವರ : ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ನರ್ನಾಡು ಎಂಬಲ್ಲಿ ಮಾ.11ರಂದು ಬೆಳಗ್ಗೆ ನಡೆದಿದೆ.

ಅಪರಿಚಿತ ವ್ಯಕ್ತಿ ಮಡ್ಗಾಂವ್- ಮಂಗಳೂರು ಮೆಮೋ ರೈಲಿಗೆ ಅಡ್ಡ ಬಂದಿದ್ದು, ಇದರ ಪರಿಣಾಮ ರೈಲು ಅವರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಆ ಎಸೆಯಲ್ಪಟ್ಟು ಹಳಿಯ ಬದಿಯಲ್ಲಿ ಬಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News