ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ

Update: 2023-03-12 04:07 GMT

ಹುಣಸೂರು, ಮಾ.11: ಇತ್ತೀಚೆಗೆ ವಿವಾಹವಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಬೆಳಗಾಂ ಜಿಲ್ಲೆಯ ಅಥಣಿ ತಾಲೂಕಿನ ತುಕರಾಮ್ ಪಡಕೆ ಎಂಬವರ ಪುತ್ರಿ ಕೃಷ್ಣಬಾಯಿ (26) ಎಂದು ಗುರುತಿಸಲಾಗಿದೆ. ಇವರು ತಾಲೂಕಿನ ಬಿಳಿಕೆರೆಯ ನಾಡ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಇತ್ತೀಚೆಗೆ ಹನೂರಿನಲ್ಲಿ ಅರಣ್ಯ ಇಲಾಖೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಬಾಷ್‌ ಬೋಷ್ಣ ಎಂಬವರೊಂದಿಗೆ ವಿವಾಹವಾಗಿದ್ದರು. ಬಿಳಿಕೆರೆ ಗ್ರಾಮದ ಎಸ್.ಬಿ.ಐ ಬ್ಯಾಂಕ್‌ನ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಒಂದು ತಿಂಗಳ ಹಿಂದೆ ಮದುವೆಗಾಗಿ ರಜೆ ಹಾಕಿ ಹೋಗಿದ್ದು ಮಾ.6ರ ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದರು. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಚಿಕ್ಕಸ್ವಾಮಿ, ಸಿಬ್ಬಂದಿ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಯಿತು.

ಪ್ರಕರಣ ದಾಖಲಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Similar News