ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಾಲಕನ ಕಪ್ಪು ಬಣ್ಣದ ಟಿ-ಶರ್ಟ್ ತೆಗೆಸಿದ ಭದ್ರತಾ ಸಿಬ್ಬಂದಿ

Update: 2023-03-12 12:11 GMT

ಮಂಡ್ಯ: ಇಂದು (ರವಿವಾರ)  ಮಂಡ್ಯದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಾಲಕನೊಬ್ಬನ ಕಪ್ಪು ಬಣ್ಣದ ಟೀ ಶರ್ಟ್ ಅನ್ನು ಭದ್ರತಾ ಸಿಬ್ಬಂದಿ ತೆಗೆಸಿರುವ ಘಟನೆ ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು ಎಕ್ಸಪ್ರೆಸ್​​ವೇಯನ್ನು ಉದ್ಘಾಟಿಸಲು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಗೆ ಆಗಮಿಸಿದ್ದಾರೆ. ಈ ಹಿನ್ನೆಯಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಜನರನ್ನು ಪರಿಶೀಲಿಸುತ್ತಿದ್ದ ವೇಳೆ ತಾಯಿಯೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಕಪ್ಪು ಬಣ್ಣದ ಟೀ ಶರ್ಟ್ ಅನ್ನು ಭದ್ರತಾ ಸಿಬ್ಬಂದಿ ತೆಗೆಸಿದ್ದಾರೆ ಎಂದು ತಿಳಿದು ಬಂದಿದೆ. 

ಈ ಬಗ್ಗೆ ಯಾವುದೇ ಕಾರಣಕ್ಕೂ ಪ್ರೋಟೋಕಾಲ್‌ಗಳನ್ನು (ಶಿಷ್ಟಾಚಾರ) ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿಪ್ರತಿ ಸಲ ರಾಜ್ಯಕ್ಕೆ ಬರುವಾಗ ಸುಳ್ಳಿನ ಮೂಟೆಯನ್ನೇ ಹೊತ್ತು ತರುತ್ತಿರುವ ಮೋದಿ: ದಿನೇಶ್ ಗುಂಡೂರಾವ್ ಕಿಡಿ

Similar News