300 ಪೌರಕಾರ್ಮಿಕರನ್ನು ಸಿಂಗಾಪುರ ಪ್ರವಾಸಕ್ಕೆ ಕಳಿಸಲು ಸರಕಾರ ಚಿಂತನೆ
Update: 2023-03-12 20:50 IST
ಬೆಂಗಳೂರು, ಮಾ.12: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮೂಲಕ ಆಯ್ಕೆಯಾಗುವ ಸುಮಾರು 300 ಪೌರಕಾರ್ಮಿಕರು ಸಿಂಗಾಪುರ ಪ್ರವಾಸಕ್ಕೆ ತೆರಳಲಿದ್ದಾರೆ.
ಪ್ರವಾಸಕ್ಕೆ ಆಯ್ಕೆಯಾದ ರಾಜ್ಯದ 300 ಪೌರಕಾರ್ಮಿಕರಲ್ಲಿ 200 ಮಂದಿ ಬಿಬಿಎಂಪಿ ಪೌರಕಾರ್ಮಿಕರು ಇರಲಿದ್ದಾರೆ. ಉಳಿದ 100 ಪೌರಕಾರ್ಮಿಕರು ಬೆಳಗಾವಿ, ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಮಹಾನಗರ ಪಾಲಿಕೆಗಳಿಗೆ ಸೇರಿದವರಾಗಿದ್ದಾರೆ.
ಸಿಂಗಾಪುರಕ್ಕೆ ಪ್ರವಾಸ ಕೈಗೊಳ್ಳುತ್ತಿರುವ ಕರ್ನಾಟಕದ ಎಲ್ಲ ಪೌರಕಾರ್ಮಿಕರು ಸಿಂಗಾಪುರದಲ್ಲಿ ಅಳವಡಿಸಿಕೊಂಡಿರುವ ಘನತ್ಯಾಜ್ಯ ನಿರ್ವಹಣೆ ಮತ್ತು ಒಳಚರಂಡಿ ಸಂಸ್ಕರಣಾ ಕಾರ್ಯವಿಧಾನಗಳನ್ನು ಅಧ್ಯಯನ ನಡೆಸಲಿದ್ದಾರೆ ಎಂದು ಬಿಬಿಎಂಪಿ ಮಾಹಿತಿಯನ್ನು ನೀಡಿದೆ.