ಉರಿಗೌಡ, ನಂಜೇಗೌಡರಿಬ್ಬರ ಹೆಸರಿನಲ್ಲಿ ಶಾಶ್ವತ ದ್ವಾರ ನಿರ್ಮಿಸುತ್ತೇವೆ: ಸಿ.ಟಿ. ರವಿ

Update: 2023-03-13 12:48 GMT

ವಿಜಯಪುರ: 'ಟಿಪ್ಪುವನ್ನು ಕೊಂದ ಉರಿಗೌಡ, ನಂಜೇಗೌಡರ ದ್ವಾರವನ್ನು ಏಕೆ ತೆರವುಗೊಳಿಸಿದ್ದಾರೋ ಗೊತ್ತಿಲ್ಲ. ನಾವು ಅವರ ಶಾಶ್ವತ ದ್ವಾರ ನಿರ್ಮಿಸುತ್ತೇವೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆ‌ ನಿಡಗುಂದಿ ಪಟ್ಟಣದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ವಿಜಯಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,'' ಉರಿಗೌಡ, ನಂಜೇಗೌಡರು ಟಿಪ್ಪುವನ್ನು ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು'' ಎಂದು ಆಕ್ರೋಶ ವ್ಯಕ್ತಪಡಿಸಿದರು. 

''ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ ಜನರಿಗೆ ನೀಡುತ್ತೇವೆ'' ಎಂದು ಹೇಳಿದರು. 

ಇದನ್ನೂ ಓದಿದಿಢೀರ್ ಬಂದಿದ್ದ 'ಉರಿಗೌಡ, ದೊಡ್ಡನಂಜೇಗೌಡ' ರಾತ್ರೋರಾತ್ರಿ ಎಲ್ಲಿ ಹೋದರು: ಮೋದಿಗೆ ಕಾಂಗ್ರೆಸ್ ಪ್ರಶ್ನೆ 

ಇದನ್ನೂ ಓದಿ: ದೊಡ್ಡಬಳ್ಳಾಪುರ: ದೇವಸ್ಥಾನಕ್ಕೆ ಹೂವಿನ ಹಾರದ ಒಳಗೆ ಮಾಂಸದ ತುಂಡುಗಳನ್ನು ತಂದಿದ್ದ ಆರೋಪಿಗಳ ಬಂಧನ


 

Similar News