ಭಟ್ಕಳ: ಕಾಂಗ್ರೆಸ್‌ ವತಿಯಿಂದ ಗ್ಯಾರಂಟಿ ಕಾರ್ಡ್‌ ವಿತರಣೆ ಕಾರ್ಯಕ್ರಮ

Update: 2023-03-13 17:12 GMT

ಭಟ್ಕಳ: ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಮಂಕಾಳ್ ವೈದ್ಯ ನೇತೃತ್ವದಲ್ಲಿ ಗ್ಯಾರಂಟಿ ಕಾರ್ಡುಗಳನ್ನು  ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಂಕಾಳ್ ವೈದ್ಯರವರು ಕಾಂಗ್ರೆಸ್ ಪಕ್ಷದ ಚುನಾವಣೆಯ ಪ್ರಣಾಳಿಕೆಯನ್ನ ಭಟ್ಕಳ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಮನೆಗೆ ವ್ಯವಸ್ಥಿತವಾಗಿ ತಲುಪಿಸುವ ಕೆಲಸವನ್ನ ಆಯಾ ಭಾಗದ ಮುಖಂಡರು ಕಾರ್ಯಕರ್ತರ ಸಹಕಾರ ಪಡೆದು ಕಟ್ಟುನಿಟ್ಟಾಗಿ ಮಾಡಬೇಕೆನ್ನುವ ಸೂಚನೆಯನ್ನ ನೀಡಿದರು. ಈಗಾಗಲೇ ಕ್ಷೇತ್ರದ ಸುಮಾರು 150 ಅಧಿಕ ಬೂತ ಮಟ್ಟದಲ್ಲಿ ಕಾಂಗ್ರೆಸ್ಸಿನ ಜನಜಾಗೃತಿ ಸಭೆಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು ಮತದಾರರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎನ್ನುವ ಸಂತಸವನ್ನ ವ್ಯಕ್ತಪಡಿಸಿದರು.

ಈ ಸಂದರ್ಭ  ವೇದಿಕೆಯ ಮೇಲೆ ಬ್ಲಾಕ್ ಕಾಂಗ್ರೆಸ ಅಧ್ಯಕ್ಷರಾದ ವೆಂಕಟೇಶ ನಾಯ್ಕ, ಕಾಂಗ್ರೆಸ್ಸಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಸಂಯೋಜಕರಾದ ಭಾಸ್ಕರ ಪಟಗಾರ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಅಬ್ದುಲ್ ಮಜೀದ, ರಾಷ್ಟ್ರೀಯ ಯುವ ಕಾಂಗ್ರೆಸ್ಸಿನ ಸಂಯೋಜಕರಾದ ಭೂದೇವ್ ಶರ್ಮರವರು ಕಾಂಗ್ರೆಸ್ ಪಕ್ಷದ ಸಂಘಟನೆಯ ಕುರಿತಾಗಿ ಮಾತನಾಡಿದರು.

ಕಾಂಗ್ರೆಸ್ಸಿನ ಮಹಿಳಾ ಅಧ್ಯಕ್ಷರಾದ ನಯನಾ ನಾಯ್ಕ, ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಜಯಶ್ರೀ ಮೊಗೇರವರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ನಾಯ್ಕ ಕಾರ್ಯಕ್ರಮವನ್ನ ನಿರ್ವಹಿಸಿದರೆ ಖಜಾಂಚಿ ದೇವಿದಾಸ ಆಚಾರಿಯವರು ಅತಿಥಿಗಳನ್ನ ಸ್ವಾಗತಿಸಿದರು.

Similar News