ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ್
ಕುಂದಾಪುರ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನ ಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆ ಯಾಗಿದ್ದಾರೆ.
ಮಂಗಳವಾರ ಕುಂದಾಪುರ ಅಂಬೇಡ್ಕರ್ ಭವನದಲ್ಲಿ ಜರಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ ಕುಂಭಾಶಿ ಹಾಗೂ ರಾಘವೇಂದ್ರ ಬಳ್ಕೂರು, ಕೋಶಾಧಿಕಾರಿಯಾಗಿ ಲೋಕೇಶ್ ಆಚಾರ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಕುಮಾರ್, ಶಶಿಧರ ಹೆಮ್ಮಾಡಿ, ಮಂಜುನಾಥ ಶೆಣೈ ಜನ್ನಾಡಿ, ಸತೀಶ್ ಆಚಾರ್ಯ ಉಳ್ಳೂರು, ವಿನಯ್ ಪಾಯಸ್, ರಾಮಕೃಷ್ಣ ಹೇರಳೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ್ ಕುಂದೇಶ್ವರ ಆಯ್ಕೆಯಾದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜಿಲ್ಲಾ ಸಂಘದ ರಜತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.