ರಾಜ್ಯದಲ್ಲಿ ಬಿಜೆಪಿ ಕಟ್ಟಿದ್ದು ಬಿಎಸ್ವೈ ಎಂದು ಸಿ.ಟಿ.ರವಿಗೂ ಗೊತ್ತಿದೆ: ಬಿ.ವೈ.ವಿಜಯೇಂದ್ರ ತಿರುಗೇಟು
Update: 2023-03-15 04:51 GMT
ಕೊಪ್ಪಳ, ಮಾ.15: 'ಕೇವಲ ಮಕ್ಕಳು ಎನ್ನುವ ಕಾರಣಕ್ಕೆ ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ, ಪಕ್ಷದ ಟಿಕೆಟ್ ನಿರ್ಧಾರ ಯಡಿಯೂರಪ್ಪ ಅವರ ಕಿಚನ್ನಲ್ಲಿ ಆಗಲ್ಲ' ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆಗೆ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ, 'ರಾಜಕಾರಣದಲ್ಲಿ ಶತ್ರುಗಳ ಸಂಖ್ಯೆ ಹೆಚ್ಚಾದಾಗ ಮಾತ್ರ ಎತ್ತರಕ್ಕೆ ಬೆಳೆಯಲು ಸಾಧ್ಯ. ಸಿ.ಟಿ.ರವಿ ಅವರು ಹಿರಿಯರು. ಯಡಿಯೂರಪ್ಪ ಅವರು ಎಷ್ಟು ಹಿರಿಯರು, ರಾಜ್ಯದಲ್ಲಿ ಬಿಜೆಪಿ ಕಟ್ಟಿದ್ದು ಅವರು ಎಂಬ ಕುರಿತು ಸಿ.ಟಿ.ರವಿ ಅವರಿಗೂ ಗೊತ್ತಿದೆ. ಹೀಗಾಗಿ ನಾನು ಆ ರೀತಿಯ ಹೇಳಿಕೆಗೆ ಉತ್ತರ ನೀಡಲ್ಲ' ಎಂದು ಹೇಳಿದ್ದಾರೆ.
'ಬಿಜೆಪಿ ಟಿಕೆಟ್ ನಿರ್ಧಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಿಚನ್ನಲ್ಲೂ ಆಗಲ್ಲ, ಮತ್ತೊಬ್ಬರ ಕಿಚನ್ನಲ್ಲೂ ಆಗಲ್ಲ' ಎಂದು ತಿರುಗೇಟು ನೀಡಿದ್ದಾರೆ.