MLC ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
Update: 2023-03-15 05:50 GMT
ಹುಬ್ಬಳ್ಳಿ: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, 'ಇದರ ಹಿಂದೆ ಬಿಜೆಪಿ ಪಾತ್ರವಿಲ್ಲ. ಬಿಜೆಪಿ ಪ್ರೇರಿತ ದಾಳಿ ಅನ್ನೋದು ಸುಳ್ಳು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತನಿಖಾ ಸಂಸ್ಥೆಗಳಿಗೆ ಎಷ್ಟು ಮುಕ್ತ ವಾತಾವರಣ ನೀಡಿದ್ದೇವೆ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿ. ಯಾರೇ ತಪ್ಪು ಮಾಡಿದರೂ ಅವರನ್ನು ಶಿಕ್ಷಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಶಂಕರ್ ಪ್ರಕರಣದಲ್ಲಿಯೂ ತನಿಖಾ ಸಂಸ್ಥೆಗಳು ತಮ್ಮದೇ ಆದ ಕ್ರಮ ಕೈಗೊಳ್ಳುತ್ತೆ' ಎಂದು ತಿಳಿಸಿದರು.
ಸಚಿವ ಸೋಮಣ್ಣ ದೆಹಲಿಗೆ ತೆರಳಲಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ, 'ಸಚಿವ ಸೋಮಣ್ಣ ದೆಹಲಿಗೆ ಹೋಗ್ತಿರೋ ವಿಚಾರ ನನಗೆ ಗೊತ್ತಿದೆ' ಎಂದು ಪ್ರತಿಕ್ರಿಯಸಿದರು.
ಇದನ್ನೂ ಓದಿ: ಬಿಜೆಪಿ MLC ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ