ಶಿರ್ವ: ಗದ್ದೆಯಲ್ಲಿ ಅನುಮಾನಾಸ್ಪದವಾಗಿ ಯುವಕ ಮೃತ್ಯು

Update: 2023-03-15 15:38 GMT

ಶಿರ್ವ : ಗದ್ದೆ ಬದಿ ಬಿದ್ದು ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಶಿರ್ವ ಕಲೊಟ್ಟುಮನೆ ನಾಗ ಬನದ ಹತ್ತಿರ ಮಾ.14ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ರವೀಂದ್ರ ನಾಯಕ್ (38) ಎಂದು ಗುರುತಿಸಲಾಗಿದೆ.

ಕುಡಿತದ ಚಟ ಹೊಂದಿದ್ದ ಇವರು ಮನೆಯ ಬಳಿಯ ಗದ್ದೆಯ ಬದಿ ನಡೆದಾಡುವಾಗ ಆಕಸ್ಮಿಕವಾಗಿ ಬಿದ್ದು ಅಥವಾ ಬೇರೆ ಯಾವ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಈ ಮರಣದ ಬಗ್ಗೆ ಸಂಶಯವಿರುವುದಾಗಿ ಮೃತರ ಸಹೋದರ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News