ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 'ಟೈಮ್ಸ್ ಬಿಸಿನೆಸ್ ಅವಾರ್ಡ್ -2023'

Update: 2023-03-15 16:57 GMT

ಮಂಗಳೂರು: ದಿ  ಟೈಮ್ಸ್ ಗ್ರೂಪ್ ನೀಡುವ ಪ್ರತಿಷ್ಠಿತ ಟೈಮ್ಸ್ ಬಿಸಿನೆಸ್ ಅವಾರ್ಡ್ -2023 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಭಾಜನವಾಗಿದೆ.

ಮಂಗಳವಾರ ಮೈಸೂರಿನ ಸೈಂಟ್ ಶೋರ್ ರಿಸಾರ್ಟ್ ಸ್ಪಾ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ' ಬೆಸ್ಟ್ ಬ್ಯಾಂಕರ್ ಇನ್ ರೂರಲ್ ಕರ್ನಾಟಕ ' ಪ್ರಶಸ್ತಿಯನ್ನು ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರ ಪರವಾಗಿ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಅವರು ನಟಿ ರಾಶಿ ಖನ್ನಾ ಅವರಿಂದ ಸ್ವೀಕರಿಸಿದರು.

ಟೈಮ್ಸ್ ಗ್ರೂಪ್ ನಡೆಸಿದ ಸಮೀಕ್ಷೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಗ್ರಾಮೀಣ ಭಾಗದಲ್ಲಿ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ಪರಿಗಣಿಸಿ ಟೈಮ್ಸ್ ಬಿಸಿನೆಸ್ ಅವಾರ್ಡ್ -2023 ಪ್ರಶಸ್ತಿಯನ್ನು ಪಡೆದಿದೆ.

ಡಾ.ಎಂ.ಎನ್ . ರಾಜೇಂದ್ರ ಕುಮಾರ್ ಸಾರಥ್ಯದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ , ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳೊಂದಿಗೆ  ರಾಜ್ಯ , ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಜನಸಾಮಾನ್ಯರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರವ ಎಸ್ ಸಿಡಿಸಿಸಿ ಬ್ಯಾಂಕ್ ರಾಜೇಂದ್ರ ಕುಮಾರ್ ಅವರ ಕಾರ್ಯ ವೈಖರಿಯಿಂದಲೇ  " ಜನಸ್ನೇಹಿ " ಬ್ಯಾಂಕ್ ಎನಿಸಿಕೊಂಡಿದೆ.

ಭಾರತ ಸರ್ಕಾರದ ಬಹು ಮಹಾತ್ವಾಕಾಂಕ್ಷೆಯ  ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಜ್ಯಾರಿಗೆ ತರುವಲ್ಲೂ ಎಸ್ ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿ ಗುರುತಿಸುವಲ್ಲೂ ಎಸ್ ಸಿಡಿಸಿಸಿ ಕಾರ್ಯ ಸಾಧನೆ ಮೇಲೈಸಿದೆ. ಈ ಯೋಜನೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೊಂದಾಯಿಸಿದ ಎಸ್ ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಎರಡು ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಪ್ರಶಸ್ತಿಗೆ ಪಾತ್ರವಾಗಿದೆ. 

Similar News