ಶಿವಮೊಗ್ಗ: ಡಿಸಿ ಕಚೇರಿ ಎದುರು ಪ್ರತಿಭಟನೆ ವೇಳೆ ಅಝಾನ್ ಕೂಗಿದ ಯುವಕನ ವಿರುದ್ಧ ದೂರು ದಾಖಲು

ಕೆ.ಎಸ್​. ಈಶ್ವರಪ್ಪ ಹೇಳಿಕೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ

Update: 2023-03-19 07:19 GMT

ಶಿವಮೊಗ್ಗ, ಮಾ.19: ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಅಝಾನ್ ಕೂಗಿದ ಆರೋಪದ ಮೇಲೆ ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಝಾನ್ ಕುರಿತು ನೀಡಿದ್ದ ಹೇಳಿಕೆ  ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಮ್​ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕಳೆದ 17ರಂದು ನಡೆದಿದ್ದ ಪ್ರತಿಭಟನೆ ವೇಳೆ ಯುವಕನೊಬ್ಬ ಅಝಾನ್ ​ ಕೂಗಿದ್ದಾನೆ. ಯುವಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

'ಘಟನೆ ಸಂಬಂಧ ಅಝಾನ್​ ಕೂಗಿದ ಯುವಕನನ್ನ ಕರೆದು ಎಚ್ಚರಿಕೆ ನೀಡಲಾಗಿದೆ ಹಾಗೂ ಈ ಸಂಬಂಧ ಕೇಸ್​ವೊಂದನ್ನ ದಾಖಲಿಸಲಾಗಿದೆ' ಎಂದು ತಿಳಿಸಿದ್ದಾರೆ.

Similar News