ಚಾಮರಾಜನಗರ: ಪತಿಯಿಂದಲೇ ಪತ್ನಿಯ ಕೊಲೆ

Update: 2023-03-20 03:45 GMT

ಚಾಮರಾಜನಗರ, ಮಾ.20: ಪತಿಯೇ ಪತ್ನಿಯನ್ನು ಮಾರಕಾಯುಧದಿಂದ ಕೊಚ್ಚಿ ಕೊಲೆಗೈದ (Murder) ಘಟನೆ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವದಿಯಾಗಿದೆ.

ರತ್ನಮ್ಮ (30) ಕೊಲೆಯಾದ ಮಹಿಳೆ. ರತ್ನಮ್ಮರ ಪತಿ ಮಹೇಶ್ ಕೊಲೆ ಆರೋಪಿಯಾಗಿದ್ದು, ಆತನನ್ನು ಚಾಮರಾಜನಗರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಂಪತಿ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ರವಿವಾರ ರಾತ್ರಿಯೂ ಇವರೊಳಗೆ ಜಗಳವಾಗಿದ್ದು, ಅದು ತಾರಕಕ್ಕೇರಿದಾಗ ಮಹೇಶ ಮಚ್ಚಿನಿಂದ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.

ಚಾಮರಾಜನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News