ಸಾಗರ: ಡೆತ್ ನೋಟ್ ಬರೆದಿಟ್ಟು ಬೆರಳಚ್ಚುಗಾರ ಆತ್ಮಹತ್ಯೆ

Update: 2023-03-20 05:20 GMT

ಸಾಗರ, ಮಾ.20: ಡೆತ್ ನೋಟ್ ಬರೆದಿಟ್ಟು ಬೆರಳಚ್ಚುಗಾರನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೆಳದಿ ಕೆರೆಯಲ್ಲಿ ರವಿವಾರ ರಾತ್ರಿ ನಡೆದಿದೆ.

ನಿತ್ಯಾನಂದ (65) ಆತ್ಮಹತ್ಯೆ ಮಾಡಿಕೊಂಡವರು.

ನಿತ್ಯಾನಂದ ಬರೆದಿದ್ದೆನ್ನಲಾದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ತನಗೆ ಎರಡೂ ಕಿವಿ ಕೇಳಿಸುವುದಿಲ್ಲ. ಇದರಿಂದ ಕೆಲಸ ಮಾಡಲು ಆಗುತ್ತಿಲ್ಲ. ಈ ಕಾರಣಕ್ಕೆ ಹೇಳಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

ನಗರದ ನ್ಯಾಯಾಲಯದ ಎದುರು ಭಾಗದಲ್ಲಿ ಕಳೆದ 40 ವರ್ಷಗಳಿಂದ ಬೆರಳಚ್ಚುಗಾರರಾಗಿ ಕೆಲಸ ಮಾಡಿಕೊಂಡಿದ್ದರು.

ಸೋಮವಾರ ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಮೆಲಕ್ಕೆತ್ತಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Similar News