ಮಂಗಳೂರು: ಕರೆನ್ಸಿ ಹೂಡಿಕೆಯಲ್ಲಿ ವಂಚನೆ ಆರೋಪ; ಓರ್ವ ಸೆರೆ

Update: 2023-03-20 14:47 GMT

ಮಂಗಳೂರು, ಮಾ. 20: ಕ್ರಿಪ್ಟೊ ಕರೆನ್ಸಿ ವ್ಯವಹಾರದಲ್ಲಿ ಹೂಡಿಕೆ ಮಾಡಿ ಭಾರೀ ಲಾಭಗಳಿಸಬಹುದು ಎನ್ನುತ್ತಾ ಹಲವರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ಹಂಝಾ ಸಿ.ಟಿ (42) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಪ್ರತೀ ತಿಂಗಳು ಶೇ.25 ಲಾಂಭಾಂಶ ನೀಡುವುದಾಗಿ ಹೇಳಿ ನಗರದ ಕಣ್ಣೂರು ಮತ್ತಿತರ ಪ್ರದೇಶದ ಹಲವಾರು ಮಂದಿಯಿಂದ ಕೋಟ್ಯಂತರ ರೂ.ಗಳನ್ನು ಹೂಡಿಕೆ ಮಾಡಿಸಿದ್ದ. ಬಳಿಕ ಲಾಭಾಂಶ ನೀಡದೆ ವಂಚಿಸಿದ್ದ ಎಂದು ಆರೋಪಿಸಲಾಗಿತ್ತು.

ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗ್ಡೆ, ಪೊಲೀಸ್ ಇನ್‌ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ, ಎಸ್ಸೈ ರಾಜೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

Similar News