7 ಹೊಸ ವಿವಿಗಳಿಗೆ ಕುಲಪತಿಗಳ ನೇಮಕ

Update: 2023-03-20 16:42 GMT

ಬೆಂಗಳೂರು, ಮಾ.20: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಏಳು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಿದ್ದು, ಬಾಗಲಕೋಟೆಯ ತೋಟಗಾರಿಕೆ ವಿವಿಯ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿಗೆ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ.ಆರ್. ಗಂಗಾಧರ ಅವರನ್ನು ಚಾಮರಾಜನಗರ ವಿವಿಗೆ ನೇಮಕ ಮಾಡಲಾಗಿದೆ.

ಬೆಳಗಾವಿಯ ಕೆ.ಎಸ್.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಶರದ್ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿಗೆ, ಡಾ.ಬಿ ಎಸ್ ಬಿರಾದಾರ್ ಅವರನ್ನು ಬೀದರ್ ವಿವಿಗೆ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಸುರೇಶ್ ಎಚ್ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿಗೆ, ಧಾರವಾಡದ ಕರ್ನಾಟಕ ವಿವಿಯ ಡಾ.ಟಿ ಸಿ ತಾರಾನಾಥ್ ಅವರನ್ನು ಹಾಸನ ವಿವಿಗೆ ಹಾಗೂ ಪ್ರೊ.ಬಿ.ಕೆ.ರವಿ ಅವರನ್ನು ಕೊಪ್ಪಳ ವಿವಿಯ ಕುಲಪತಿಗಳಾಗಿ ನೇಮಿಸಲಾಗಿದೆ.

Similar News