ಮಂಗಳೂರು: ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Update: 2023-03-21 05:43 GMT

ಮಂಗಳೂರು ಮಾ.21: ತ್ಯಾಜ್ಯ ವಿಲೇವಾರಿ ಮತ್ತು ಯುಜಿಡಿ ಕಾರ್ಮಿಕರು ಮುಷ್ಕರ ಕಾರಣ ಕಳೆದ 10 ದಿನಗಳಿಂದ ನಗರದಲ್ಲಿ ತ್ಯಾಜ್ಯ ವಿಲೇವಾರಿ ಆಗುತ್ತಿಲ್ಲ. ಪೌರ ಕಾರ್ಮಿಕರ ಸಮಸ್ಯೆಗೆ ಪರಿಹಾರ ಕಲ್ಪಿಸುವಲ್ಲಿ, ತ್ಯಾಜ್ಯ ವಿಲೇವಾರಿಗೆ  ವ್ಯವಸ್ಥೆ ಕಲ್ಪಿಸುವಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು.

ಮಹಾನಗರ ಪಾಲಿಕೆ ಕಚೇರಿಯ ಎದುರು ಮಂಗಳೂರು ನಗರ, ಮಂಗಳೂರು ದಕ್ಷಿಣ ಮತ್ತು ಮಂಗಳೂರು ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಮನಪಾ ವಿಪಕ್ಷ ನಾಯಕ ನವೀನ್ ಡಿಸೋಜ, ಎ.ಸಿ.ವಿನಯರಾಜ್, ಪ್ರಕಾಶ್ ಸಾಲ್ಯಾನ್, ಅಬ್ದುಲ್ ರವೂಫ್, ಮಂಜುಳಾ ನಾಯಕ್, ಶಶಿಧರ ಹೆಗ್ಡೆ, ಮುಹಮ್ಮದ್ ಕುಂಜತ್ತಬೈಲ್, ಡಿಕೆ ಅಶೋಕ್‌ ಕುಮಾರ್‌‌, ಶಾಲೆಟ್ ಪಿಂಟೋ ಮತ್ತಿತರರು ಪಾಲ್ಗೊಂಡಿದ್ದರು.

Similar News