ಕಾಸರಗೋಡು: ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು

Update: 2023-03-21 06:39 GMT

ಕಾಸರಗೋಡು, ಮಾ.21: ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಿಂದ ವರದಿಯಾಗಿದೆ.

ಬಂದಡ್ಕ ಮಾಲಕುಂಡ  ಇಲ್ಲತಿಂಗಲ್ ನಿವಾಸಿ ಸುಜಾತಾ ಎಂಬವರ ಪುತ್ರಿ ಕೆ.ವಿ.ಶರಣ್ಯಾ(17) ಮೃತಪಟ್ಟವರು. ಇವರು ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ.

ಸುಜಾತಾ ಸೋಮವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಬಾಗಿಲು ಮುಚ್ಚಿದ್ದ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಶರಣ್ಯಾಳ ಮೃತದೇಹ ಪತ್ತೆಯಾಗಿದೆ. ಮಂಚದಲ್ಲಿ ಕುಳಿತುಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿತ್ತೆನ್ನಲಾಗಿದೆ.

ಈ ಬಗ್ಗೆ ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Similar News