ರಾಜಾಜಿನಗರ ಟಿಕೆಟ್ ಗೆ ಒತ್ತಾಯ: ಸಿದ್ದರಾಮಯ್ಯ ನಿವಾಸದ ಮುಂದೆ ಭವ್ಯ ನರಸಿಂಹಮೂರ್ತಿ ಬೆಂಬಲಿಗರ ಪ್ರತಿಭಟನೆ

Update: 2023-03-21 06:58 GMT

ಬೆಂಗಳೂರು: ಕಾಂಗ್ರೆಸ್ ನಾಯಕಿ ಭವ್ಯ ನರಸಿಂಹಮೂರ್ತಿ ಅವರಿಗೆ ಮುಂಬರಲಿರುವ ವಿಧಾನಸಭೆ ಚುನಾವಣೆಗೆ ರಾಜಾಜಿನಗರ ಕ್ಷೇತ್ರದ ಟಿಕೆಟ್ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ.  

ಇಂದು (ಮಂಗಳವಾರ) ಬೆಳಗ್ಗೆ ನಗರದ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಜಮಾಯಿರುವ ಭವ್ಯ ನರಸಿಂಹಮೂರ್ತಿ ಹಾಗೂ ಇತರ ಮೂಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು, ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಪುಟ್ಟಣ್ಣಗೆ ಯಾವುದೇ ಕಾರಣಕ್ಕೂ ಟಿಕೆಟ್ ಟಿಕೆಟ್ ನೀಡಬೇಡಿ ಎಂದು ಅಗ್ರಹಿಸಿದ್ದಾರೆ.

ಬಿಜೆಪಿಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ಇತ್ತೀಚೆಗಷ್ಟೇ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 

Full View

Similar News