ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ (ಮಾ.22) ಬಿಡುಗಡೆ: ಡಿ.ಕೆ.ಶಿವಕುಮಾರ್

Update: 2023-03-21 14:25 GMT

ಮಂಡ್ಯ, ಮಾ.21: ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ(ಮಾ.22) ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ಪತ್ನಿ ಸಮೇತ ಅಮಾವಾಸ್ಯೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾಡಿಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.

ಸಂಸದ ಡಿ.ಕೆ.ಸುರೇಶ್ ರಾಜ್ಯ ರಾಜಕಾರಣಕ್ಕೆ ಬರಬೇಕೆಂದು ಕಾಂಗ್ರೆಸ್ ಒತ್ತಡ ಇತ್ತು. ಆದರೆ, ಅವರು ಬರುವುದಿಲ್ಲವೆಂದು ಹೇಳಿದ್ದಾರೆ. ಹಾಗಾಗಿ ಯಾರೇ ಅಭ್ಯರ್ಥಿಯಾದರೂ ನಾನೇ ಅಭ್ಯರ್ಥಿ ಎಂದು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಅವರು ಪ್ರತಿಕ್ರಿಯಿಸಿದರು.

ಮಾಜಿ ಸಂಸದೆ ರಮ್ಯ ವಿಧಾನಸಭೆ ಸ್ಪರ್ಧೆ ಮತ್ತು ಸಚಿವ ನಾರಾಯಣಗೌಡ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತಂತೆ ಅವರನ್ನೇ ಕೇಳುವುದು ಒಳ್ಳೆಯದು ಎಂದ ಅವರು, ಈ ಹಿಂದೆ ಕಾಂಗ್ರೆಸ್‍ನಲ್ಲಿ ಸಚಿವರಾಗಿದ್ದ ಬಾಬುರಾವ್ ಚಿಂಚಸನೂರು ಮತ್ತೆ ಕಾಂಗ್ರೆಸ್‍ಗೆ ಬರುತ್ತಿರುವುದು ಪಕ್ಷಕ್ಕೆ ದೊಡ್ಡ ಆಸ್ತಿ ಇದ್ದಂತೆ ಎಂದು ಹೇಳಿದರು.

Similar News