ಮಂಗಳೂರು: ಹಾಜಿ ಮುಹಮ್ಮದ್ ಮಸೂದ್ ನೇತೃತ್ವದಲ್ಲಿ ರಮಝಾನ್ ಕಿಟ್ ವಿತರಣೆ

Update: 2023-03-21 15:20 GMT

ಮಂಗಳೂರು: ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್ ಮತ್ತವರ ಸಹೋದರ ಉದ್ಯಮಿ ಹಾಜಿ ಕೆ.ಎಸ್. ನಿಸಾರ್ ಅಹ್ಮದ್ ಕಾರ್ಕಳ ಹಾಗೂ ಕುಟುಂಬಸ್ಥರು ದ.ಕ.ಜಿಲ್ಲೆಯ ಸುಮಾರು 600ಕ್ಕೂ ಅಧಿಕ ಅರ್ಹರಿಗೆ ರಮಝಾನ್ ಕಿಟ್ ವಿತರಿಸಿದರು.

ಕುದ್ರೋಳಿಯಲ್ಲಿರುವ ತನ್ನ ಸ್ವಗೃಹದಲ್ಲಿ ಸೋಮವಾರ ಮತ್ತು ಮಂಗಳವಾರ ಕಿಟ್ ಹಸ್ತಾಂತರಿಸಿದ ಈ ಕಾರ್ಯಕ್ರಮದಲ್ಲಿ ಹಾಜಿ ಮುಹಮ್ಮದ್ ಮಸೂದ್ ಅವರ ಪುತ್ರ ಡಾ. ಮುಹಮ್ಮದ್ ಆರೀಫ್ ಮಸೂದ್ ಮತ್ತಿತರರು ಉಪಸ್ಥಿತರಿದ್ದರು.

Similar News