ಕರಾವಳಿಯಲ್ಲಿ ಗುರುವಾರದಿಂದ ರಮಝಾನ್ ಉಪವಾಸ ಆರಂಭ

Update: 2023-03-22 15:21 GMT

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿರುವುದರಿಂದ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಮತ್ತು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಹಾಗೂ ಭಟ್ಕಳ ಚಂದ್ರದರ್ಶನ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯಾದ್ಯಂತ ಶುಕ್ರವಾರ ರಮಝಾನ್ ಉಪವಾಸ ಆರಂಭ

Similar News