ಕ್ಷೇತ್ರ ಗೊಂದಲದ ನಡುವೆ ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಬಾದಾಮಿ ಪ್ರವಾಸ, ರೋಡ್ ಶೋ

Update: 2023-03-23 12:22 GMT

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಾಳೆ (ಶುಕ್ರವಾರ) ಬಾದಾಮಿ ಮತಕ್ಷೇತ್ರದಲ್ಲಿ ಪ್ರವಾಸ ಹಮ್ಮಿಕೊಂಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಈಗಾಗಲೇ ಕೋಲಾರ ಮತಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆಣಬ ವದಂತಿ ನಡುವೆ  ಬಾದಾಮಿ ಮತಕ್ಷೇತ್ರದಲ್ಲಿ ಸುಮಾರು 500 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುವುದರ ಜೊತೆಗೆ ಬಾದಾಮಿ ಪಟ್ಟಣದಲ್ಲಿ ರೋಡ್ ಶೋ ಮಾಡುವ ಮೂಲಕ ಮತ್ತೆ ಬಾದಾಮಿ ಯಿಂದಲೇ ಸ್ಪರ್ಧೆ ಮಾಡಲು ಚಿಂತನೆ ನಡೆಸಿದ್ದಾರೆಂದು ಸಾರ್ವಜನಿಕ ವಲಯ ದಲ್ಲಿ ಚರ್ಚೆ ಆಗುತ್ತಿದೆ. ಈ ಮಧ್ಯೆ ನಾಳೆ ಅವರ ಆಪ್ತ ವಲಯದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಖಚಿತವಾಗಿ ಮಾಹಿತಿ ನೀಡುತ್ತಾರೆ ಎಂದು ಸಹ ಹೇಳಲಾಗುತ್ತದೆ.

ವರುಣ,ಕೋಲಾರ,ಕುಷ್ಟಗಿ ಬಳಿಕ ಬಾದಾಮಿ ಯಿಂದಲೇ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯ ಅವರ ಆಪ್ತರ ಬಳಗ ಒತ್ತಾಯ ಮಾಡಿದೆ. ಆದರೆ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂದು ಸಿದ್ದರಾಮಯ್ಯ ಗೊಂದಲಮಯವಾಗಿದೆ. ಈ ಹಿನ್ನಲೆ ನಾಳೆ ನಡೆಯುವ ಬಾದಾಮಿ ಸಮಾವೇಶ ಹಾಗೂ ರೋಡ್ ಶೋ ಕುತೂಹಲ ಮೂಡಿಸಿದೆ.

Similar News