ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ರಂಗಕರ್ಮಿಗಳ ಆಯ್ಕೆ

Update: 2023-03-23 13:56 GMT

ಉಡುಪಿ : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ ಮಾ.26ರ ಸಂಜೆ 4:00ಕ್ಕೆ ಉಡುಪಿಯ ಮಲಬಾರ್ ಗೋಲ್ಡ್ ಶಾಖೆಯಲ್ಲಿ ವಿಶ್ವರಂಗ ಪುರಸ್ಕಾರ-2023’ ಪ್ರದಾನ ಮಾಡಲಾಗುವುದು.

ರಾಜ್ಯ ಮತ್ತು ಹೊರರಾಜ್ಯದ  ಐವರು ಹಿರಿಯ  ರಂಗಕರ್ಮಿಗಳಾದ ಮೂರ್ತಿ ದೇರಾಜೆ (ರಂಗ ನಿರ್ದೇಶಕರು), ಶೋಭಾ ವೆಂಕಟೇಶ್, ಬೆಂಗಳೂರು (ಮಕ್ಕಳ ರಂಗಭೂಮಿ), ಎಂ.ಎಸ್. ಭಟ್ ಉಡುಪಿ (ರಂಗ ನಟ), ಮೋಹನ್ ಮಾರ್ನಾಡ್ ಮುಂಬೈ (ರಂಗ ನಟ ಹೊರ ರಾಜ್ಯ), ಪ್ರಕಾಶ್ ನೊರೋನ್ಹ ಪಾಂಬೂರು (ರಂಗ ಸಂಘಟಕರು) ಇವರಿಗೆ ಮಾ.26 ರಂದು ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸಮಾರಂಭದ ಅಧ್ಯಕ್ಷತೆಯನ್ನು ನಾಡಿನ ಹಿರಿಯ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಲಾವಣ್ಯ ಬೈಂದೂರಿನ ಗಣೇಶ್ ಕಾರಂತ್ ಹಾಗೂ ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ತಲ್ಲೂರು ಚಂದ್ರಶೇಖರ ಶೆಟ್ಟಿ ಉಪಸ್ಥಿತರಿರುತ್ತಾರೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಯುವ ಸಂಚಯದ ಕಲಾವಿದೆ ಪವಿತ್ರ ನಾಯ್ಕ ಇವರಿಂದ ಏಕವ್ಯಕ್ತಿ ರಂಗ ಪ್ರಯೋಗ  ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 

Similar News