ಮಣಿಪಾಲ: ಗಾಂಜಾ ಸೇವನೆ ಆರೋಪ; 5 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

Update: 2023-03-23 16:34 GMT

ಉಡುಪಿ, ಮಾ.23: ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಮಣಿಪಾಲ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು ನಿಖಿಲ್ ಎಂ.(22), ತನ್ವೀರ್ ರೆಡ್ಡಿ(25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21) ಹಾಗೂ ತುಷಾರ್ ಜಿ.(21) ಎಂದು ಗುರುತಿಸಲಾಗಿದೆ.

ಮಣಿಪಾಲ ಠಾಣಾ ಉಪನಿರೀಕ್ಷಕ ನವೀನ್ ನಾಯ್ಕ್ ಅವರು ರೌಂಡ್ಸ್‌ನಲ್ಲಿದ್ದಾಗ ವಿದ್ಯಾರ್ಥಿಗಳು ಗಾಂಜಾ ಸೇವಿಸಿದ ಸಂದೇಹದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಎಲ್ಲಾ ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ದೃಢ ಪಟ್ಟಿತ್ತು. ಈ ಬಗ್ಗೆ ಮಣಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆರ್ಗದಲ್ಲಿ ಇಬ್ಬರು ವಶಕ್ಕೆ: ಹೆರ್ಗ ಗ್ರಾಮದ ಈಶ್ವರ ನಗರದಲ್ಲಿ ಕಾರ್ತಿಕ್ ಸಂಜೀವ ಹಾಗೂ ಮ್ಯಾಥಿವ್ ಥೋಮಸ್ ಎಂಬಿಬ್ಬರನ್ನು ಉಡುಪಿ ಸೆನ್ ಠಾಣೆಯಲ್ಲಿ ಪೊಲೀಸರು ವಶಕ್ಕೆ ಪಡೆದು ಮಣಿಪಾಲ ಪೊರೆನ್ಸಿಕ್ ವಿಭಾಗದಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿತ್ತು. ಇಬ್ಬರ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Similar News