ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೋಷಿ: ರಾಹುಲ್ ಗಾಂಧಿ ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧಾರ

Update: 2023-03-24 05:26 GMT

ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸೂರತ್ ಕೋರ್ಟ್ ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ಒಂದು ದಿನದ ನಂತರ ಶುಕ್ರವಾರ  ವಿಜಯ ಚೌಕದಲ್ಲಿ  ಬೃಹತ್ ಪ್ರತಿಭಟನೆ ನಡೆಸಲು  ಕಾಂಗ್ರೆಸ್ ಯೋಜಿಸಿದೆ.

ಮೋದಿ ಉಪನಾಮ ಟೀಕಿಸಿದ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆಯಾದ ಬೆನ್ನಲ್ಲೇ ಸಾಮೂಹಿಕ ಪ್ರತಿಭಟನೆ ಘೋಷಿಸಿರುವ ಕಾಂಗ್ರೆಸ್ ಈ ಪ್ರಕರಣವನ್ನು ಕಾನೂನುಬದ್ದವಾಗಿ ಮಾತ್ರವಲ್ಲದೆ ರಾಜಕೀಯವಾಗಿಯೂ ಹೋರಾಡುವುದಾಗಿ ಹೇಳಿದೆ.

ತೀರ್ಪಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಿವಾಸದಲ್ಲಿ ಗುರುವಾರ ಪಕ್ಷದ ಹಿರಿಯ ಮುಖಂಡರು ಹಾಗೂ ಸಂಸದರ ಸಭೆ ನಡೆಸಿದ್ದಾರೆ. ಶುಕ್ರವಾರ ವಿಜಯ್ ಚೌಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ತೀರ್ಪಿನ ಬಗ್ಗೆ ಚರ್ಚಿಸಲು ಪಕ್ಷದ ಇತರ ನಾಯಕರೊಂದಿಗೆ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಮಧ್ಯಾಹ್ನ ಭೇಟಿ ಮಾಡಲು ಕಾಂಗ್ರೆಸ್ ಯೋಜಿಸಿದೆ.  

Similar News