ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವದ ಕಗ್ಗೊಲೆ: ವೆರೋನಿಕಾ

Update: 2023-03-24 13:07 GMT

ಉಡುಪಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೊ ಅಭಿಪ್ರಾಯಪಟ್ಟಿದ್ದಾರೆ.

ಮೋದಿಯವರನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ  ಜನರಿಂದ ಆಯ್ಕೆಗೊಂಡ ಸಂಸದರನ್ನು ಅಮಾನತುಗೊಳಿ ಸುತ್ತಾರೆ ಎಂದರೆ ಈ ಹಿಂದೆ ಹಲವು ಬಾರಿ ಹಲವು ಬಿಜೆಪಿ ಪಕ್ಷದ ನಾಯಕರು ಕೂಡ ಟೀಕಿಸಿದ ಅನೇಕ ಉದಾಹರಣೆಗಳಿವೆ. ಅವರೆಲ್ಲರನ್ನು ಹೀಗಿಯೇ ಅಮಾನತು ಮಾಡುತ್ತಾ ಹೋದರೆ ಮುಂದೊಂದು ದಿನ ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಇವರ ಪಕ್ಷದವರು ಸಂಪೂರ್ಣ ಖಾಲಿಯಾಗಬೇಕಾಗಿತ್ತು.

ನರೇಂದ್ರ ಮೋದಿಯವರು ದೇಶದ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ವಾಕ್ ಸ್ವಾತಂತ್ರ್ಯ ಎಂಬ ಪದ ಸಂಪೂರ್ಣ ವಾಗಿ ಅರ್ಥ ಕಳೆದುಕೊಂಡಿದೆ. ಅಭಿವೃದ್ಧಿಯ ವಿಚಾರ ಬಿಟ್ಟು, ದ್ವೇಷ ರಾಜಕಾರಣ ಮಾಡುವುದರಲ್ಲಿ ಬಿಜೆಪಿ ಪಕ್ಷ ಎಷ್ಟೊಂದು ವೇಗವಾಗಿದೆ ಎನ್ನುವುದು ಇದರಿಂದ ತಿಳಿಯುತ್ತದೆ. ರಾಹುಲ್ ಗಾಂಧಿಯವರು ಅದಾನಿ ವಿಷಯ ಎತ್ತಿದಾಗಿನಿಂದ ಮೋದಿಯವರ ಸರಕಾರವು ಅವರ ಮೇಲೆ ದ್ವೇಷ ಸಾಧಿಸುತ್ತಿದೆ. ಮೋದಿ ಸರಕಾರದ ದ್ವೇಷದ ರಾಜಕಾರಣದ ಇನ್ನೊಂದು ಉದಾಹರಣೆ ಇದು. ದೇಶದ ಜನರೂ ಕೂಡ ಇವರ ಜನವೀರೋಧಿ ನೀತಿಗಳನ್ನು ಹಾಗೂ ದ್ವೇಷ ರಾಜಕೀಯವನ್ನು ಗಮನಿಸುತ್ತಿದ್ದು ಇದಕ್ಕೆಲ್ಲಾ ಸೂಕ್ತವಾದ ಉತ್ತರವನ್ನು ನೀಡುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News