×
Ad

ಕರಾವಳಿ ಭದ್ರತಾ ತರಬೇತಿ: ಸಮಾರೋಪ ಸಮಾರಂಭ

Update: 2023-03-24 19:30 IST

ಉಡುಪಿ, ಮಾ.24: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 2ನೇ ತಂಡದ ತರಬೇತಿಯ ಸಮಾರೋಪ ಸಮಾರಂಭ ಮಲ್ಪೆಯ ಸಿಎಸ್‌ಪಿ ಕೇಂದ್ರ ಕಚೇರಿಯಲ್ಲಿ  ನಡೆಯಿತು.

ಕಾರ್ಯಕ್ರಮದಲ್ಲಿ ಮುಖಯ ಅತಿಥಿಯಾಗಿದ್ದ ಜಿಲ್ಲಾ ಹೋಮ್ ಗಾರ್ಡ್ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ, ಸೂಕ್ತ ತರಬೇತಿಯಿಂದ  ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಚ್ಚು ಪರಿಣಿತರಾಗಿ ಇಲಾಖೆಯಲ್ಲಿ ಸಮರ್ಥ ರೀತಿಯಲ್ಲಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದೆ. ತೊಂದರೆಗೀಡಾದ ಸಾರ್ವಜನಿಕರ ಜೀವರಕ್ಷಣೆಗೆ ತರಬೇತಿಯು  ಅನುಕೂಲವಾಗಲಿದೆ ಎಂದರು.

ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದ ಸಿಎಸ್‌ಪಿ ಹೆಜಮಾಡಿ ಠಾಣೆಯ ಎಎಸ್‌ಐ ಮೋಹನದಾಸ್,  ದ್ವಿತೀಯ ಸ್ಥಾನ ಪಡೆದ ಸಿಎಸ್‌ಪಿ ಮಂಗಳೂರು ಠಾಣೆಯ ಎಎಸ್‌ಐ ಲಿಂಗಪ್ಪ, ಸಿಎಸ್‌ಪಿ ಕೇಂದ್ರ ಕಚೇರಿಯ ಎಪಿಸಿ ಸತೀಶ್, ತೃತೀಯ ಸ್ಥಾನ ಪಡೆದ ಕಾರವಾರ ಠಾಣೆಯ ಸಿಪಿಸಿ ವಿಧ್ಯಾಧರ ನಾಯಕ್ ಹಾಗೂ ಮಹಿಳಾ ವಿಭಾಗದಲ್ಲಿ ಉತ್ತಮ ಸಾಧನೆಗೈದ ಪಿಎಸ್‌ಐ ಅಕ್ಷಯ ಕುಮಾರಿ ಅವರನ್ನು ಸನ್ಮಾನಿಸಲಾಯಿತು.

ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. 

ಪೊಲೀಸ್ ನಿರೀಕ್ಷಕ ಪ್ರಮೋದಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನಿಸ್ತಂತು ವಿಭಾಗದ ಪಿಐ ಕರುಣಾಸಾಗರ ವಂದಿಸಿದರು.

15 ದಿನಗಳ ತರಬೇತಿ ಅವಧಿಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಯೋಗ, ಈಜು, ಸಮುದ್ರಈಜು, ಬೋಟ್ ಪೆಟ್ರೋಲಿಂಗ್, ಬೋರ್ಡಿಂಗ್ ಅಪರೇಷನ್, ನೇವಲ್‌ಬೇಸ್ ಭೇಟಿ, ಕೋಸ್ಟ್‌ಗಾರ್ಡ್ ಭೇಟಿ ಹಾಗೂ ವಿವಿಧ ಉಪನ್ಯಾಸಗಳನ್ನು ಏರ್ಪಡಿಸಲಾಗಿತ್ತು.  

Similar News