ಮಮತಾ ಬ್ಯಾನರ್ಜಿ ಭೇಟಿಯಾದ ಕುಮಾರಸ್ವಾಮಿ; ಮಹತ್ವದ ಚರ್ಚೆ

Update: 2023-03-24 16:09 GMT

ಬೆಂಗಳೂರು\ ಕೋಲ್ಕತಾ: ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಇಂದು ಸಂಜೆ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. 

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ, 'ಪಶ್ಚಿಮ ಬಂಗಾಳದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರನ್ನು ಇಂದು ಕೋಲ್ಕತಾದಲ್ಲಿ ಗೌರವಪೂರ್ವಕವಾಗಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಅವರು ಅತ್ಯಂತ ವಿಶ್ವಾಸಪೂರ್ವಕವಾಗಿ ನನ್ನನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮುಂಬರುವ ವಿಧಾನಸಭೆ ಚುನಾವಣೆ, ಪಂಚರತ್ನ ರಥಯಾತ್ರೆಯ ಯಶಸ್ಸಿನ ಬಗ್ಗೆ ಹಾಗೂ ರಾಷ್ಟ್ರ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಯಿತು' ಎಂದು ತಿಳಿಸಿದ್ದಾರೆ. 

'ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಆಗಮಿಸುವುದಾಗಿ ಮಮತಾ ಬ್ಯಾನರ್ಜಿ ಅವರು ಹೇಳಿದರಲ್ಲದೆ, ರಾಷ್ಟ್ರ ರಾಜಕಾರಣದಲ್ಲಿ  ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ ಮತ್ತು ಜಾತ್ಯತೀತ ಜನತಾದಳ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವ ಬಗ್ಗೆಯೂ ಚರ್ಚಿಸಿದರು' ಎಂದು ಕುಮಾರಸ್ವಾಮಿ ಅವರು ಪ್ರಕಟಿಸಿದ್ದಾರೆ. 

Similar News