ಟಿಕೆಟ್ ಬೇಡ ಅಂತ ಹೇಳಿದ್ದೆ, ಆದರೂ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ: ಶಾಸಕ ತನ್ವೀರ್ ಸೇಠ್

Update: 2023-03-25 09:03 GMT

ಮೈಸೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದ ತನ್ವೀರ್ ಸೇಠ್ ಅವರು ಹೆಸರು ಪಟ್ಟಿಯಲ್ಲಿದೆ. 

ಮೈಸೂರಿನ ನರಸಿಂಹರಾಜ ಕ್ಷೇತ್ರದಿಂದ ತನ್ವೀರ್ ಸೇಠ್ ಅವರಿ​​ಗೆ ಟಿಕೆಟ್​ ನೀಡಿದ್ದು, ಈ ಬಗ್ಗೆ ತನ್ವೀರ್​ ಸೇಠ್​ ಪ್ರತಿಕ್ರಿಯಿಸಿದ್ದಾರೆ. 

'ನಾನು ನನ್ನ ಭಾವನೆಗಳನ್ನು ವ್ಯಕ್ತಪಡಿಸಿದಂತಹ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಒತ್ತಡದಿಂದಾಗಿ ನಾನು ಹೈಕಮಾಂಡ್ ತೀಮಾನದ ಮೇಲೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದೆ. ಆದರೆ ಇದೀಗ ಹೈಕಮಾಂಡ್ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ನನಗೆ ಅವಕಾಶ ಕೊಟ್ಟಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಏನೇನು ತೀರ್ಮಾನ ಕೈಗೊಳ್ಳಬೇಕೆಂಬ ಬಗ್ಗೆ ವರಿಷ್ಠರ ಬಳಿ ಚರ್ಚೆ ಮಾಡುತ್ತೇನೆ' ಎಂದು ಹೇಳಿದರು.

'ಮೊದಲನೆಯದಾಗಿ ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ' ಎಂದು ಇದೇ ವೇಳೆ ತಿಳಿಸಿದರು. 

ಇದನ್ನೂ ಓದಿ: ರಾಜಕೀಯ ನಿವೃತ್ತಿ ಘೋಷಣೆ ವದಂತಿ: ತನ್ವೀರ್ ಸೇಠ್ ನಿವಾಸದ ಎದುರು ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗ

Similar News