ಮುಸ್ಲಿಮ್ ಸಮುದಾಯದ ಮೀಸಲಾತಿ ರದ್ಧತಿಗೆ ಖಂಡನೆ: ಎಂ.ಪಿ. ಮೊಯಿದಿನಬ್ಬ

Update: 2023-03-25 11:44 GMT

ಉಡುಪಿ: ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದು ಪಡಿಸಿದ ರಾಜ್ಯ ಸರಕಾರದ ತೀರ್ಮಾನ ಅತ್ಯಂತ ಖಂಡನೀಯ. ಸರಕಾರ ಕೂಡಲೇ ಈ ತೀರ್ಮಾನವನ್ನು ಹಿಂಪಡೆಯ ಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ. ಮೊಯಿದಿನಬ್ಬ ಆಗ್ರಹಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಪ್ರವರ್ಗ 2ಬಿ ಅಡಿಯಲ್ಲಿ ಇದ್ದ ಶೇ.4 ಮೀಸಲಾತಿಯನ್ನು ಹಿಂಪಡೆದು ಇನ್ನೊಂದು ಸಮುದಾಯಕ್ಕೆ ನೀಡುವ ಮೂಲಕ ರಾಜ್ಯ ಸರಕಾರವು ಸಮುದಾಯಗಳ ನಡುವೆ ದ್ವೇಷದ ಕಿಡಿ ಹೊತ್ತಿಸಿ ಮುಂದಿನ ಚುನಾವಣೆಯಲ್ಲಿ ಮತ ಗಳಿಸುವ ಕೆಟ್ಟ ಯೋಚನೆ ಮಾಡಿದೆ ಎಂದು ಮೊಯಿದಿನಬ್ಬ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

Similar News