ರೈತಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರ ಚರ್ಚೆ

Update: 2023-03-27 09:58 GMT

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದ ರೈತ ಸಂಘದ ಅಭ್ಯರ್ಥಿಗೆ ಬೆಂಬಲ ನೀಡುವ ಸಂಬಂಧ ಕಾಂಗ್ರೆಸ್ ನಾಯಕರು ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಸಭೆ ನಡೆಸಿದರು. 

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯಸಭೆಯ ಮಾಜಿ ಉಪ ಸಭಾಪತಿ ಡಾ.ಕೆ.ರಹ್ಮಾನ್ ಖಾನ್, ಮಾಜಿ ಸಚಿವ ಝಮೀರ್ ಅಹ್ಮದ್, ನಾಗಮಂಗಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಸೇರಿ ಹಲವು ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದರು. 

ಮಾಜಿ ಶಾಸಕ, ರೈತ ಸಂಘದ ಮುಖಂಡ ದಿವಂಗತ ಕೆ.ಎಸ್ ಪುಟ್ಟಣ್ಣಯ್ಯ ಪುತ್ರ ದರ್ಶನ್,  ಸರ್ವೋದಯ ಕರ್ನಾಟಕ ಪಕ್ಷದಿಂದ 2018ರ ಚುನಾವಣೆಗೆ ಮೇಲುಕೋಟೆಯಿಂದ ಕಣಕ್ಕಿಳಿದಿದ್ದರು. ಆ ಸಂದರ್ಭದಲ್ಲೂ ಕೂಡ ಕಾಂಗ್ರೆಸ್ ಬೆಂಬಲ ನೀಡಿತ್ತು. ಆದರೆ, ಜೆಡಿಎಸ್‌ನ ಸಿ. ಎಸ್. ಪುಟ್ಟರಾಜು ವಿರುದ್ಧ ಸೋಲು ಕಂಡಿದ್ದರು.

Similar News