ಇದು ನನ್ನ ಕೊನೆಯ ಚುನಾವಣೆ: ವಿನಯಕುಮಾರ್ ಸೊರಕೆ

Update: 2023-03-27 12:12 GMT

ಕಾಪು: ಕಾಪು ಕ್ಷೇತ್ರದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಪಕ್ಷವು ಅವಕಾಶ ನೀಡಿದೆ. ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಒಗ್ಗಟ್ಟಿನ ಫಲವಾಗಿ ಈ ಅವಕಾಶ ನನಗೆ ಸಿಕ್ಕಿದೆ ಎಂದು ಕಾಂಗ್ರೆಸ್ ಪಕ್ಷದ ಕಾಪು ವಿಧಾನಸಭಾ ಅಭ್ಯರ್ಥಿ ವಿನಯಕುಮಾರ್ ಸೊರಕೆ ಹೇಳಿದರು.

ಕಾಪುವಿನಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕನಾಗಿ, ಸಂಸದನಾಗಿ, ಸಚಿವನಾಗಿ ನನಗೆ ಪಕ್ಷ ಅನೇಕ ಅವಕಾಶವನ್ನು ಕೊಟ್ಟಿದೆ. ಕಳೆದ ಬಾರಿಯೇ ನಾನು ಕಡೆಯ ಚುನಾವಣೆ ಎಂದು  ಘೋಷಣೆ ಮಾಡಿದ್ದೆ, ಆದರೆ ವಿರೋಧ ಪಕ್ಷಗಳ ಅಪಪ್ರಚಾರದಿಂದ ಸೋಲಾಯಿತು. ನಾನು ಸೋತರೂ ಐದು ವರ್ಷ ಕ್ಷೇತ್ರದ ಜನರ ಜೊತೆ ನಿಕಟ ಸಂಪರ್ಕದಿಂದ ಇದ್ದೆ. ಇದರಿಂದ ಎಲ್ಲರ ಬೆಂಬಲದೊಂದಿಗೆ ಮತ್ತೊಮ್ಮೆ  ಸರ್ವಾನುಮತದಿಂದ ಅಭ್ಯರ್ಥಿಯಾದೆ. ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ. ಜನಸೇವೆ ಮಾಡಲು 5 ವರ್ಷ ಅವಕಾಶ ನೀಡಿ ಎಂದು ಜನರಲ್ಲಿ ವಿನಂತಿ ಮಾಡುತ್ತೇನೆ ಎಂದರು.

Similar News