ಉಡುಪಿ, ಬ್ರಹ್ಮಾವರದಲ್ಲಿ ಸ್ಮಶಾನದ ಜಮೀನಿಗೆ ಅರ್ಜಿ ಸಲ್ಲಿಸಲು ಸೂಚನೆ

Update: 2023-03-27 13:51 GMT

ಉಡುಪಿ, ಮಾ.27: ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರಕಾರದ ಉದ್ದೇಶವಾಗಿದ್ದು, ಉಡುಪಿ ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕ ರಿಗೆ ಅವರ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಬೇಡಿಕೆ ಗಳನ್ನು ತಾಲೂಕಿನ ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.

ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, ಗ್ರಾಮದ ಹೆಸರು, ನಗರ, ತಾಲೂಕು ಹಾಗೂ ಜಿಲ್ಲೆಗಳ ಮಾಹಿತಿ ಯನ್ನು ಒದಗಿಸುವಂತೆ ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News