ಆಸ್ಕರ್ ಫೆರ್ನಾಂಡಿಸ್ ಹುಟ್ಟುಹಬ್ಬ: ಹಣ್ಣು ಹಂಪಲು ವಿತರಣೆ

Update: 2023-03-27 15:16 GMT

ಉಡುಪಿ, ಮಾ.27: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ದಿ.ಆಸ್ಕರ್ ಫೆರ್ನಾಂಡಿಸ್ ಅವರ 82ನೇ ಹುಟ್ಟುಹಬ್ಬದ ಸವಿನೆನಪಿಗಾಗಿ ಮಿಷನ್ ಕಾಂಪೌಂಡ್‌ನ ಸಿಎಸ್‌ಐ ಬಾಲಕರ ವಸತಿ ನಿಲಯದ ಅನಾಥಶ್ರಮದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಆಸ್ಕರ್ ಫರ್ನಾಂಡಿಸ್ ನಡೆದು ಬಂದ ದಾರಿ, ಅವರ ಆದರ್ಶ ಗಳನ್ನು ವಿವರಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಸ್ಕರ್ ಫರ್ನಾಂಡಿಸ್ ಅವರ ಜನಸೇವೆ ಹಾಗೂ ಅವರ ಕೊಡುಗೆಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ನರಸಿಂಹಮೂರ್ತಿ, ನಾಗೇಶ್ ಕುಮಾರ್ ಉದ್ಯಾವರ, ರೋನಾಲ್ಡ್ ಮನೋಹರ್ ಕರ್ಕಡ, ಗಣೇಶ್ ನೆರ್ಗಿ, ಶರತ್ ಶೆಟ್ಟಿ, ಪುಂಡರೀಶ್ ಕುಂದರ್, ಚಾರ್ಲ್ಸ್ ಅಂಬ್ಲರ್, ಮೇಡಮ್ ಕ್ಲಾರಾ, ಸ್ಯಾಮ್ಯುಯೆಲ್, ಸಂಜಯ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Similar News