ಕಾರ್ಕಳ ಪುರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಮಾರಂಭ

Update: 2023-03-28 04:52 GMT

ಕಾರ್ಕಳ: ಕಾರ್ಕಳ ಪುರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ 13ನೇ ವಾರ್ಡಿನ ಚುನಾಯಿತ ಸದಸ್ಯ ಪ್ರದೀಪ್ ರಾಣೆಯವರಿಗೆ ಅಭಿನಂದನೆ ಕಾರ್ಯಕ್ರಮವು ಕಾಳಿಕಾಂಬ ದೇವಸ್ಥಾನದ ಬಳಿ ಜರುಗಿತು.

ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್ ಮಾತನಾಡಿ, ಜನಪರ ಕೆಲಸ ಕಾರ್ಯಗಳ ಮೂಲಕ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರದೀಪ್ ರಾಣೆ, ತನ್ನ ಮೇಲೆ ಪಕ್ಷ ಇಟ್ಟಿರುವ ನಂಬಿಕೆ ವಿಶ್ವಾಸಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ಜವಾಬ್ದಾರಿ ನಿರ್ವಹಿಸುವೆ ಎಂದರು.

ನಗರ ಬಿಜೆಪಿ ಅಧ್ಯಕ್ಷ ನ್ಯಾಯವಾದಿ ರವೀಂದ್ರ ಮೊಯ್ಲಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ವಾರ್ಡ್ ಅಧ್ಯಕ್ಷ ಹರೀಶ್ ದೇವಾಡಿಗ, ನಗರ ಪ್ರಧಾನ ಕಾರ್ಯದರ್ಶಿ ನಿರಂಜನ್ ಜೈನ್, ನಾಮನಿರ್ದೇಶಿತ ಸದಸ್ಯ ಸಂತೋಷ್ ರಾವ್, ಉದ್ಯಮಿ ಜಯಂತ್ ಭಂಡಾರಿ, ಪ್ರಸಾದ್ ದೇವಾಡಿಗ, ಪುರಸಭಾ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Similar News