ಸುರತ್ಕಲ್: ಸರ್ವಜ್ಞ ವೃತ್ತ ಲೋಕಾರ್ಪಣೆ

Update: 2023-03-28 04:58 GMT

ಸುರತ್ಕಲ್: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಬೋಂದೆಲ್ ಜಂಕ್ಷನ್ ಬಳಿ ನೂತನವಾಗಿ ನಿರ್ಮಿಸಿರುವ ಸರ್ವಜ್ಞ ವೃತ್ತ ಸೋಮವಾರ ಉದ್ಘಾಟನೆಗೊಂಡಿತು.

ಪ್ರಾಸ್ತಾವಿಕ ಮಾತನ್ನಾಡಿದ ರಾಜ್ಯ ಕುಂಬಾರರ ಯುವ ವೇದಿಕೆ ಸ್ಥಾಪಕಾಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು, ರಾಜ್ಯದಲ್ಲೇ ಇಷ್ಟು ದೊಡ್ಡದಾದ ಸರ್ವಜ್ಞನ ವೃತ್ತ ಬೇರೆಲ್ಲೂ ಇಲ್ಲ. ಈ ಮೂಲಕ ಜ್ಞಾನ ವೃದ್ಧಿಗೆ ಸಹಕಾರಿಯಾಗಲಿದೆ. ಕುಲಾಲ ಸಮುದಾಯದ ಸರ್ವಶ್ರೇಷ್ಠ ಸಂತ ಸರ್ವಜ್ಞನ ಸ್ಮರಣೆ ಎಲ್ಲ ಕಾಲಕ್ಕೂ ನೆನಪಿನಲ್ಲಿ ಉಳಿಯಬೇಕು ಎಂದರು.

ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ, ಮುಡಾ ವತಿಯಿಂದ ಮಂಗಳೂರು ಉತ್ತರ ಕ್ಷೇತ್ರದುದ್ದಕ್ಕೂ ಹತ್ತಾರು ಜನಪರ ಕಾಮಗಾರಿಗಳು ನಡೆಯುತ್ತಿವೆ. ಇದಕ್ಕಾಗಿ ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಕಾರ್ಪೊರೇಟರ್ ಸಂಗೀತಾ ನಾಯಕ್, ಸುಧೀರ್ ಶೆಟ್ಟಿ ಕಣ್ಣೂರು, ಮಯೂರ್ ಉಳ್ಳಾಲ, ಕುಲಾಲ ಕುಂಬಾರರ ಯುವ ವೇದಿಕೆ ಅಧ್ಯಕ್ಷ ಸುಕುಮಾರ್ ಬಂಟ್ವಾಳ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಗಂಗಾಧರ್ ಭಂಜನ್, ಅನಿಲ್ ದಾಸ್, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ರಣ್ ದೀಪ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.

Similar News