ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು: ಸಿದ್ದರಾಮಯ್ಯ

Update: 2023-03-28 08:01 GMT

ಬೆಂಗಳೂರು: 'ಮಾಡಾಳ್ ವಿರೂಪಾಕ್ಷಪ್ಪ ಬಂಧನ ಮೊದಲ ದಿನವೇ ಆಗಬೇಕಿತ್ತು, ತಡವಾಗಿ ಆಗಿದೆ. ಕಾನೂನು ರೀತಿಯ ನಿರ್ಣಯದಂತೆ ಆಗಿದೆ. ರೆಡ್ ಹ್ಯಾಂಡ್ ಆಗಿ ಅವರ ಮಗ ಸಿಕ್ಕಿಬಿದ್ದಿರುವುದರಿಂದ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಬಂಧನ ಸರಿಯಾಗಿದೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  'ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು' ಎಂದು ಹೇಳಿದರು. 

'ಯಡಿಯೂರಪ್ಪ ಅವರು ಬಂಜಾರ ಸಮುದಾಯದ ಜನ ತಪ್ಪು ಗ್ರಹಿಕೆಯಿಂದ ಕಲ್ಲು ತೂರಾಟ ಮಾಡಿದ್ದಾರೆ ಎಂದಿದ್ದಾರೆ, ಆದರೆ ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧ ಮಾಡಿಕೊಂಡು ಬಂದಿದೆ. ಈ ಉದ್ದೇಶಕ್ಕೆ ಈಗ ವಿರೋಧ ಮಾಡಿರಬಹುದು' ಎಂದು ತಿಳಿಸಿದರು. 

Similar News