ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ: ಸಿದ್ದರಾಮಯ್ಯ

''ಮುಂದಿನ ಚುನಾವಣೆಯಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಅಚ್ಚರಿ ಇಲ್ಲ''

Update: 2023-03-28 11:52 GMT

ಮೈಸೂರು,ಮಾ.28: ನನ್ನ ಕೊನೆ ಚುನಾವಣೆ ಹುಟ್ಟೂರುನಲ್ಲಿ ಆಗಬೇಕೆಂಬ ಆಸೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯಲ್ಲಿ ಮಂಗಳವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ ಎಂದು ಹೇಳಿದರು.

ವರುಣಾ ಕ್ಷೇತ್ರ ಸಿದ್ದರಾಮಯ್ಯಗೆ ಲಕ್ಕಿ ಕ್ಷೇತ್ರ ವಿಚಾರದ ಕುರಿತು ಮಾತನಾಡಿ, ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು. ಯಾವುದೇ ಒಂದು ಕ್ಷೇತ್ರ ಲಕ್ಕಿ ಅಂತ ಇಲ್ಲ. ವರುಣಾ ನನ್ನ ಹುಟ್ಟೂರು. ವರುಣಾ ಹೋಬಳಿ ಕಾರಣಕ್ಕೆ ವರುಣಾ ಕ್ಷೇತ್ರ ಅಂಥಾ ಕರೆಯುತ್ತಿದ್ದಾರೆ ಎಂದರು.

ಹೈಕಮಾಂಡ್ ಗಳ ಜೊತೆ ಮಾತನಾಡಿದ್ದೇನೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ   ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ಹೈಕಮಾಂಡ್ ಜೊತೆಗೆ ಯಾರೂ ಮಾತನಾಡಿಲ್ಲ. ಈ ಬಾರಿ ನಾವು ಯಾರ ಜೊತೆಯೂ ಮಾತುಕತೆ ಮಾಡಲ್ಲ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ ಎಂದು ತಿರುಗೇಟು ನೀಡಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಘಟನೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದ್ಧ ಸಿಎಂ ಬಸವರಾಜ ಬೊಮ್ಮಾಯಿಗೆ ವಿರೋಧ ಪಕ್ಷದ ನಾಯಕ  ಸಿದ‍್ಧರಾಮಯ್ಯ ತಿರುಗೇಟು ನೀಡಿದರು.

ಕಲ್ಲು ತೂರಾಟದ ಬಗ್ಗೆ ಬಿ.ಎಸ್.ಯಡಿಯೂರಪ್ಪ ಏನು  ಏನು ಹೇಳಿದ್ದಾರೆ. ಕಲ್ಲುತೂರಾಟಕ್ಕೂ ಕಾಂಗ್ರೆಸ್ ಗೂ ಸಂಬಂಧ ಇಲ್ಲ ಎಂದಿದ್ದಾರೆ.  ಯಡಿಯೂರಪ್ಪನವರೇ ಕಾಂಗ್ರೆಸ್  ಗೆ ಸಂಬಂಧ ಇಲ್ಲ ಅಂತಾ ಹೇಳಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರಿಗಿಂತ ಸಿಎಂ ಬೊಮ್ಮಾಯಿಗೆ ಹೆಚ್ಚು ಗೊತ್ತಾ ಬೊಮ್ಮಾಯಿಗಿಂತ ಹೆಚ್ಚು ಮಾಹಿತಿ ಬಿ.ಎಸ್.ಯಡಿಯೂರಪ್ಪ ಅವರಿಗೆ  ಇರುತ್ತೆ ಎಂದು ಹೇಳಿದರು. 

Similar News