ಉಡುಪಿ: ಅಗ್ನಿ ಬನ್ನಿರಾಯ ಜಯಂತಿ ಆಚರಣೆ

Update: 2023-03-28 14:59 GMT

ಉಡುಪಿ : ಭಾರತೀಯ ಪರಂಪರೆಗೆ ವಿಶೇಷವಾದ ಕೊಡುಗೆ ಯನ್ನು ನೀಡಿದ ಮಹನೀಯರು ಕೇವಲ ಒಂದು ಜನಾಂಗಕ್ಕೆ ಸೀಮಿತ ವಾಗಿರದೆ ಮಾನವ ಜನಾಂಗದ ಏಳಿಗೆಗೆ ಬಹಳಷ್ಟು ಶ್ರಮಿಸಿದ್ದಾರೆ. ಇಂತಹ ಮಹನೀಯರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹೇಳಿದ್ದಾರೆ.

ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀಅಗ್ನಿ ಬನ್ನಿರಾಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅಗ್ನಿ ಬನ್ನಿರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್‌ಕೃಷ್ಣಪ್ಪ, ಉಡುಪಿ ಕನ್ನಡ ಸಾಹಿತ್ಯ ಪರಿಷತ್‌ನ ನರಸಿಂಹ ಮೂರ್ತಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ನಮ್ಮ ಭೂಮಿಯ ರಾಮಾಂಜಿ ಕಾರ್ಯಕ್ರಮ ನಿರೂಪಿಸಿ, ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ವಂದಿಸಿದರು.

Similar News