ಕಾರ್ಕಳ: ಬೈಲೂರಿನಲ್ಲಿ ಸಾಂಸ್ಕೃತಿಕ ವೈಭವ

Update: 2023-03-28 15:00 GMT

ಉಡುಪಿ: ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಕಾರ್ಕಳ ತಾಲೂಕು ಬೈಲೂರು ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್‌ನಲ್ಲಿ ನಡೆಯಿತು.

ಯಕ್ಷರಂಗಾಯಣದ ಅಧ್ಯಕ್ಷ ಜೀವನ್‌ರಾಂ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಬೈಲೂರು ಗ್ರಾಪಂ ಅಧ್ಯಕ್ಷ ಜಗದೀಶ್ ಪೂಜಾರಿ, ನೀರೆ ಗ್ರಾಮಪಂಚಾಯತ್ ಅಧ್ಯಕ್ಷೆ ಶಾಲಿನಿ, ಎರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಪೂಜಾರಿ, ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಶೆಟ್ಟಿ, ಉಡುಪಿ ನಗರಸಭೆ ಸದಸ್ಯ ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಬೈಲೂರು ಘಟಕ ಮೇಲ್ವಿಚಾರಕಿ ಸೌಮ್ಯ, ಕಾರ್ಕಳ ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಉದ್ಯಮಿ ಗಳಾದ ಸಂತೋಷ್ ವಾಗ್ಲೆ, ರಮೇಶ್ ಕಿಣಿ, ರಮೇಶ ಶೆಟ್ಟಿ, ಸುಭಾಶ್ ಶೆಟ್ಟಿ ಹಾಗೂ ಸನಾತನ ನಾಟ್ಯಾಲಯದ ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸುಮಿತ್ ಶೆಟ್ಟಿ ಕೌಡೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜೋಗಿ ಸುನೀತ ಮತ್ತು ತಂಡ ಬೆಂಗಳೂರು ಇವರಿಂದ ಜಾನಪದ ಹಾಗೂ ಶಿಶುನಾಳ ಶರೀಫ್ ಹಾಡುಗಳು, ಸನಾತನ ನೃತ್ಯಾಲಯ ಮಂಗಳೂರು ಇವರಿಂದ ಸನಾತನ ರಾಷ್ಟ್ರಾಂಜಲಿ ನೃತ್ಯ ಕಾರ್ಯಕ್ರಮ,  ಸೃಷ್ಟಿ ಕಲಾ ಕುಟೀರ ಉಡುಪಿ ಇವರಿಂದ ಮಹಾಕಾಳಿ ನೃತ್ಯರೂಪಕ ಹಾಗೂ ಪವನ್ ಆಚಾರ್  ಬಳಗದಿಂದ ಪಂಚ ವೀಣಾವಾದನ ಕಾರ್ಯಕ್ರಮಗಳು ನಡೆದವು. 

Similar News