ರಾಜ್ಯ ಮಟ್ಟದ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿ ಪ್ರಕಟ
Update: 2023-03-28 20:33 IST
ಉಡುಪಿ, ಮಾ.28: ಕೇಂದ್ರ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ ನೀಡುವ 2021-22 ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿಗೆ ಕಾರ್ಕಳ ತಾಲೂಕು ಅಬ್ಬನಡ್ಕ ಶ್ರೀದುರ್ಗಾಪರಮೇಶ್ವರಿ ಯುವಕ ಮಂಡಲ ಆಯ್ಕೆಯಾಗಿದ್ದು, ಪ್ರಶಸ್ತಿಯು 75 ಸಾವಿರ ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿದೆ.
ರಾಷ್ಟ್ರಮಟ್ಟದಲ್ಲಿ ಉಡುಪಿ ಜಿಲ್ಲೆಯು ರಾಜ್ಯವನ್ನು ಪ್ರತಿನಿಧಿಸಲಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಪ್ರೆಡ್ ಡಿ ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.