ಬಳ್ಳಾರಿ ಮೇಯರ್ ಚುನಾವಣೆ: ಯು.ಟಿ.ಖಾದರ್ ಸೇರಿ ಮೂವರು ವೀಕ್ಷಕರನ್ನು ನೇಮಕ ಮಾಡಿದ ಕಾಂಗ್ರೆಸ್

Update: 2023-03-28 16:07 GMT

ಬೆಂಗಳೂರು, ಮಾ.28: ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ವೀಕ್ಷಕರನ್ನಾಗಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ,  ಮಾಜಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಮಂಜುನಾಥ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಯೋಜಿಸಿದ್ದಾರೆ.

ಮಾ. 29ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರು ಮತ್ತು ಉಪ ಮಹಾಪೌರರ ಸ್ಥಾನಕ್ಕೆ ಹಾಗೂ 4 (ನಾಲ್ಕು) ಸ್ಥಾಯಿ ಸಮಿತಿಗಳ ಚುನಾವಣೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ನಿಯೋಜಿತ ವೀಕ್ಷಕರುಗಳು ಕೂಡಲೇ ಬಳ್ಳಾರಿಗೆ ಭೇಟಿ ನೀಡಿ, ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರು ಮತ್ತು ಉಪ ಮಹಾಪೌರರ ಹಾಗೂ 4 (ನಾಲ್ಕು) ಸ್ಥಾಯಿ ಸಮಿತಿಗಳ ಚುನಾವಣೆಗೆ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಸಹಕಾರದಲ್ಲಿ ಜಿಲ್ಲೆಯ ಪಕ್ಷದ ಎಲ್ಲಾ ಮುಖಂಡರು ಹಾಗೂ ಮಹಾನಗರ ಪಾಲಿಕೆಯ ನಮ್ಮ ಪಕ್ಷದ ಎಲ್ಲಾ ಸದಸ್ಯರುಗಳೊಂದಿಗೆ ಚರ್ಚಿಸಿ ಸರ್ವಸಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಿ ಬಹುಮತದೊಂದಿಗೆ ಆಯ್ಕೆಯಾಗುವಂತೆ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

 

Similar News