ವಿಟ್ಲ: ಮನೆಗೆ ನುಗ್ಗಿ-ನಗದು ಕಳವು

Update: 2023-03-28 17:00 GMT

ವಿಟ್ಲ: ವಿದೇಶಕ್ಕೆ ತೆರಳುವ ಮಗಳನ್ನು ಏರ್‌ಪೋರ್ಟ್‌ಗೆ ಬಿಡಲು ಹೋಗಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ನಗ-ನಗದು ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬೊಣ್ಯಕುಕ್ಕು ಎಂಬಲ್ಲಿ ನಡೆದಿದೆ.

ವೀರಕಂಭ ಗ್ರಾಮದ ಬೊಣ್ಯಕುಕ್ಕು ಜನತಾ ಕಾಲನಿ ನಿವಾಸಿ ಮಹಮ್ಮದ್ ಮುಸ್ಲಿಯಾರ್ ಅವರು ಕುಟುಂಬ ಸಮೇತರಾಗಿ ಮಾ.27ರಂದು ರಾತ್ರಿ ವಿದೇಶಕ್ಕೆ ತೆರಳಲಿದ್ದ ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ತೆರಳಿದ್ದರು. ಅವರು ಮರಳಿ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿತ್ತಲ್ಲದೇ ಮನೆಯ ಛಾವಣಿಗೆ ಏಣಿ ಇಟ್ಟು ಮನೆಯೊಳಗೆ ನುಗ್ಗಿ ಕಪಾಟಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.

ವಿಟ್ಲ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

Similar News